ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಸೇವೆಯಿಂದ ಅಮಾನತು
ಮಂಗಳೂರು: ಅಸಹಾಯಕ ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಸ್ಥಾನದಲ್ಲಿದ್ದುಕೊಂಡು, ಅವರನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು ರೂಪಿಸಿದ್ದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಅವರನ್ನ ಸೇವೆಯಿಂದ ಅಮಾನತುಗೊಲಿಸುವಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಮೂಡುಬಿದಿರೆ ಠಾಣೆಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿದ್ದ ಲೈಂಗಿಕ ಕಿರುಕುಳದ ಕುರಿತು ದೂರುಗಳು ಕೇಳಿಬಂದ ತಕ್ಷಣ, ಮಂಗಳೂರು ಪೊಲೀಸ್ ಕಮಿಷನರ್ ಅವರು ಎಸಿಪಿ (ACP) ಅವರಿಗೆ ಸಮಗ್ರ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದರು. ಪ್ರಕರಣದ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳನ್ನು ಪರಿಶೀಲಿಸಿದ ಎಸಿಪಿ, ಇನ್ಸ್ಪೆಕ್ಟರ್ ಸಂದೇಶ್ ದೂರು ನೀಡಲು ಬಂದ ಮಹಿಳೆಯರ ಜೊತೆ ಅತ್ಯಂತ ಅಸಭ್ಯವಾಗಿ ಮತ್ತು ಅನುಚಿತವಾಗಿ ವರ್ತಿಸಿರುವುದು ನಿಜ ಎಂದು ವರದಿ ನೀಡಿದ್ದರು.
ಕಾಮೆಂಟ್ ಬಿಡಿ