ಸ್ಕೂಟರ್ ಗೆ ಕಾರೊಂದು ಡಿಕ್ಕಿ;ಸವಾರ ಸ್ಥಳದಲ್ಲೇ ಸಾವು; ಹಳೆಯಂಗಡಿಯ ಕಾರಿನ ಚಾಲಕ ಮುಹಮ್ಮದ್ ತೌಫೀಕ್ ವಶಕ್ಕೆ
ಸುರತ್ಕಲ್ : ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿ, ಸಹಸವಾರ ಬಾಲಕ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ರವಿವಾರ ರಾತ್ರಿ ನಡೆದಿದೆ.
ಮೃತರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ(61) ಎಂದು ಗುರುತಿಸಲಾಗಿದೆ. ಮೂಲತಃ ಉತ್ತರ ಕರ್ನಾಟದ ಸದ್ಯ ಚೇಳಾಯರಿನಲ್ಲಿ ವಾಸವಿರುವ ಹನುಮಂತ ಎಂಬವರ ಪುತ್ರ ವಿಶ್ವನಾಥ (16) ಗಾಯಗೊಂಡ ಬಾಲಕ. ಆತನನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಕಾರಣವಾಗಿರುವ ಕಾರಿನ ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬವರನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಹಾಲು ಖರೀದಿಗೆ ಬಂದಿದ್ದ ನೆರೆ ಮನೆಯ ಬಾಲಕನನ್ನು ವಿಶ್ವಾನಾಥ ರನ್ನು ಕುಳ್ಳಿರಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 66ನ್ನು ದಾಟುತ್ತಿದ್ದ ವೇಳೆ ಹಳೆಯಂಗಡಿ ಕಡೆಯಿಂದ ಸುರತ್ಕಲ್ ತನ್ನ ತೆರಳುತ್ತಿದ್ದ ಕಾರು ಢಿಕ್ಕಿಹೊಡೆದಿದೆಯೆನ್ನಲಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
ಕಾಮೆಂಟ್ ಬಿಡಿ